ಹೋಟೆಲ್ನಲ್ಲಿ ಹೊಟ್ಟೆ ತುಂಬಾ ತಿಂದು ಹಣ ನೀಡದೆ ಮಾಲಿಕರಿಗೆ ಬೆದರಿಕೆ
Thumbnail
ಮಣಿಪಾಲ : ಹೋಟೆಲ್ ಗೆ ಆಗಮಿಸಿ ಹೊಟ್ಟೆ ತುಂಬಾ ತಿಂದು ಹಣವನ್ನು ಕೊಡದೆ ಹೋಟೆಲ್ ಮಾಲಿಕರಿಗೆ ಬೆದರಿಕೆಯೊಡ್ಡಿದ ಘಟನೆ ಮುರ್ಡೇಶ್ವರ ಭಟ್ಕಳ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಜುಲೈ 5ರಂದು ನಡೆದಿದೆ. ಹಬೀಬುಲ್ಲಾ ಇವರ ಹೋಟೆಲ್ ಗೆ ಮೊಹಮ್ಮದ್ ಅನ್ವರ್ ಎಂಬಾತ ಕಾರಿನಲ್ಲಿ ಬಂದು ತಿಂಡಿ ತಿಂದು ಚಾ ಕುಡಿದು ಅದರ ಹಣವನ್ನು ಪಾವತಿಸದೇ ಕಾರಿನ ಬಳಿ ಹೋದಾಗ ಮಾಲಿಕರು ಹಣವನ್ನು ಕೇಳಿದಾಗ ಕೈಯಿಂದ ಹೊಡೆದು ಅಡ್ಡಗಟ್ಟಿ ಪಿಸ್ತೂಲ್ ತರಹ ಇರುವ ಒಂದು ವಸ್ತುವನ್ನು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
06 Jul 2022, 12:00 PM
Category: Kaup
Tags: