ಪಡುಬಿದ್ರಿ : ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ
Thumbnail
ಪಡುಬಿದ್ರಿ : ಕಾಪು ತಾಲೂಕಿನ ಹಲವೆಡೆ ಕಡಲ್ಕೊರೆತ ಉಂಟಾಗಿದ್ದು ಆ ಸ್ಥಳಗಳಿಗೆ ಮತ್ತು ಪಡುಬಿದ್ರಿಯಲ್ಲಿ ಕಡಲ್ಕೊರೆತಕ್ಕೆ ಒಳಗಾದ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದರು. ಈ ಸಂದರ್ಭ ಬಂದರು ಹಾಗೂ ಮೀನುಗಾರಿಕಾ ಕಾರ್ಯನಿರ್ವಾಹಕ ಇಂಜಿನಿಯರ್ ಉದಯಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋಧ ಪೂಜಾರಿ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಪಂಚಾಯತ್ ಸದಸ್ಯರುಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
10 Jul 2022, 01:19 PM
Category: Kaup
Tags: