ನಂದಳಿಕೆ : ಅಪಘಾತ - ಸಹೋದರರಿಬ್ಬರ ದುರ್ಮರಣ
ಕಾರ್ಕಳ : ದ್ವಿಚಕ್ರ ವಾಹನವು ಕಾರಿಗೆ ಢಿಕ್ಕಿಯಾಗಿ ಸಹೋದರರಿಬ್ಬರು ಸಾವನ್ನಪ್ಪಿದ ಘಟನೆ ನಂದಳಿಕೆಯಲ್ಲಿ ನಡೆದಿದೆ.
ಸಹೋದರರಿಬ್ಬರು ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಮೃತ ಸಂದೀಪ್ ಕುಲಾಲ್ ಜೇಸಿ ಸಂಸ್ಥೆಯಲ್ಲಿ ಕೋಶಾಧಿಕಾರಿ ಆಗಿದ್ದು, ಹಿಂದೆ ಜ್ಯೂನಿಯರ್ ಜೇಸಿ ಅಧ್ಯಕ್ಷ ಆಗಿ ಉತ್ತಮ ಸಾಧನೆ ಮಾಡಿದ್ದರು.
