ಕಾಪು : ಬಿಜೆಪಿಯಿಂದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ; ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ
Thumbnail
ಕಾಪು : ಬಿಜೆಪಿಯ ಕಾಪು ಮಂಡಲ ರೈತ ಮೋರ್ಚಾ ಮತ್ತು ಗ್ರಾಮ ವಿಕಾಸ ಸಮಿತಿ ಪಟ್ಲ ಇವುಗಳ ಜಂಟಿ ಸಹಯೋಗದಲ್ಲಿ ಜುಲೈ 18ರಂದು ಪಟ್ಲದಲ್ಲಿ ಕೇಂದ್ರ ಸರ್ಕಾರದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ಹಾಗೂ ನೇಜಿ ನಾಟಿಯ ಪ್ರಾತ್ಯಕ್ಷಿಕೆ ಕಾರ್ಯ ಜರಗಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಯು.ಎಸ್.ನಾಯಕ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಗದ್ದೆಯಲ್ಲಿ ನೇಜಿ ನೆಟ್ಟು ಕೃಷಿಯ ಪ್ರತ್ಯಕ್ಷ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಂಡಲದ ರೈತ ಮೋರ್ಚಾ ಅಧ್ಯಕ್ಷ ಗುರುನಂದ ನಾಯಕ್, ರಾಜ್ಯ ಸಾವಯವ ಕೃಷಿ ನಿಗಮದ ನಿರ್ದೇಶಕ ರಾಘವೇಂದ್ರ ಉಪ್ಪೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ., ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಉಪಾಧ್ಯಕ್ಷರಾದ ಶೈಲೇಶ್ ಶೆಟ್ಟಿ ಮತ್ತು ಸುಬ್ರಮಣ್ಯ ಕರ್ಕೇರ, ಜಿಲ್ಲಾ ಉಸ್ತುವಾರಿಗಳಾದ ಪದ್ಮನಾಭ ಹೆಗಡೆ, ಯು.ಎಸ್.ನಾಯಕ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ್ ಪ್ರಭು ಮುಂತಾದವರು ಉಪಸ್ಥಿತರಿದ್ದರು.
Additional image Additional image
18 Jul 2022, 06:20 PM
Category: Kaup
Tags: