ಪಲಿಮಾರು : ಬಿಜೆಪಿ ವತಿಯಿಂದ ಆಟಿಡೊಂಜಿ ಕಮಲ ಕೂಟ
Thumbnail
ಪಲಿಮಾರು : ಇಲ್ಲಿನ ಬಿಜೆಪಿ ಹಿಂದುಳಿದ ವರ್ಗ ಮೋರ್ಚ, ಪಲಿಮಾರು ಮತ್ತು ನಂದಿಕೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ‌ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪಲಿಮಾರು ಶಕ್ತಿಕೇಂದ್ರ ಪ್ರಮುಖರಾದ ಗಾಯತ್ರಿ ಪ್ರಭು, ಸೌಮ್ಯಲತಾ ಶೆಟ್ಟಿ, ಹಿಂದುಳಿದ ವರ್ಗ ಮೋರ್ಚ ವಕ್ತಾರರಾದ ವಿಠ್ಠಲ ಪೂಜಾರಿ, ಕಾಪು ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮತ್ತಿತರರು ಉಪಸ್ಥಿತರಿದ್ದರು. ‌ ರವಿ‌ ಕೋಟ್ಯಾನ್ ಉದ್ಯಾವರ ಹಾಗೂ ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು. ಆಟಿ ವಿಶಿಷ್ಟತೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಮಾತನಾಡಲಾಯಿತು. ಸುಮಾರು 45 ಜನ ಹಿರಿಯ ಕಾರ್ಯಕರ್ತರನ್ನು ಗೌರವಿಸಲಾಯಿತು.
Additional image
25 Jul 2022, 12:18 AM
Category: Kaup
Tags: