ಕಾಪು ಶಾಸಕರಿಂದ 2 ಲಕ್ಷದ ಪರಿಹಾರ ಚೆಕ್ ಹಸ್ತಾಂತರ
Thumbnail
ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಉಳಿಯಾರಗೋಳಿ ರಘು ಪೂಜಾರಿ ಮನೆಗೆ ಭೇಟಿ ನೀಡಿ 2 ಲಕ್ಷ ಮೊತ್ತದ ಪರಿಹಾರ ಚೆಕ್ ಹಸ್ತಾಂತರಿಸಿದರು. ಕಳೆದ ದೀಪಾವಳಿ ಸಂದರ್ಭದಲ್ಲಿ ಕಾಪು ತಾಲೂಕು ಉಳಿಯಾರಗೋಳಿ ಗ್ರಾಮದ ರೋಹಿತ್ ರವರು ಮನೆಯ ಅಂಗಳದಲ್ಲಿಯೇ ಹಾವು ಕಡಿತದಿಂದಾಗಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮನೆಗೆ ತೆರಳಿ ಮಾನ್ಯ ಶಾಸಕರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು. ಸರಕಾರದಿಂದ ಸುಮಾರು 2 ಲಕ್ಷ ರೂ.ಗಳನ್ನು ಮಂಜೂರಾತಿ ಮಾಡಿಸಿ ಇದರ ಮಂಜೂರಾತಿ ಪತ್ರವನ್ನು ಮೃತ ರೋಹಿತ್ ತಂದೆ ರಾಘು ಕೆ ಪೂಜಾರಿ ಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನೀರಿಕ್ಷಕರು ಸುಧೀರ್ ಕುಮಾರ್ ಶೆಟ್ಟಿ, ಹೊಸಮಾರಿಗುಡಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ರಮೇಶ್ ಹೆಗ್ಡೆ, ಪುರಸಭೆ ಸದಸ್ಯರಾದ ಸುರೇಶ್ ದೇವಾಡಿಗ, ಲತಾ ದೇವಾಡಿಗ, ಪ್ರದೀಪ್ ಹಾಗೂ ಸ್ಥಳೀಯರಾದ ರಮೇಶ್ ಶೆಟ್ಟಿ, ಉಪಸ್ಥಿತರಿದ್ದರು.
30 Jul 2022, 08:10 PM
Category: Kaup
Tags: