ಆಗಸ್ಟ್ 31 : ಕಳತ್ತೂರು ಜ್ಯೋತಿನಗರ ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ
Thumbnail
ಕಾಪು : ಕಳತ್ತೂರು ಶ್ರೀ ಗಣೇಶೋತ್ಸವ ಸಮಿತಿಯ 32ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 31, ಬುಧವಾರದಂದು ಶ್ರೀ ಶೈಲಾ ಮಂಟಪ ಜ್ಯೋತಿನಗರದಲ್ಲಿ ಕೇಶವ ತಂತ್ರಿಯವರ ನೇತೃತ್ವದಲ್ಲಿ ನೆರವೇರಲಿದೆ. ಆಗಸ್ಟ್ 28ರ ಬೆಳಿಗ್ಗೆ 9 ರಿಂದ ಊರಿನವರಿಗೆ ಹಾಗೂ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ, ಆಗಸ್ಟ್ 31ರಂದು ಪೂಜಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ರಾತ್ರಿ ಮಂಗಲಮೂರ್ತಿಯ ಜಲದಿವಾಸ ನಡೆದು ಎಲ್ಲಾ ಕಾರ್ಯಕ್ರಮ ಅಂದು ಸಮಾಪ್ತಿಗೊಳ್ಳಲಿದೆ ಎಂದು ಸಮಿತಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
31 Jul 2022, 04:06 PM
Category: Kaup
Tags: