ಉಡುಪಿಯ ಪ್ರಖ್ಯಾತ ವಕೀಲರಾದ ಸಂಕಪ್ಪ.ಎ ಜೆಡಿಎಸ್ ಸೇರ್ಪಡೆ
Thumbnail
ಉಡುಪಿ : ಇಲ್ಲಿಯ ಪ್ರಖ್ಯಾತ ವಕೀಲರು, ಬಿಲ್ಲವ ಮುಖಂಡರು, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಅದ ಸಂಕಪ್ಪ.ಎ ಅವರಿಗೆ ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್. ಎಲ್. ಬೋಜೆ ಗೌಡ, ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ನಾಯಕರಾದ ವಸಂತ ಪೂಜಾರಿ ಮಂಗಳೂರು, ಇಕ್ಬಾಲ್ ಮಂಗಳೂರು, ಇಕ್ಬಾಲ್ ಅತ್ರಾಡಿ, ಭರತ್ ಶೆಟ್ಟಿ, ಸಂಜಯ್, ಚಂದ್ರಹಾಸ್ ಮತ್ತು ರಜಾಕ್ ಉಪಸ್ಥಿತರಿದ್ದರು.
01 Aug 2022, 09:30 PM
Category: Kaup
Tags: