ಮಿಸ್ ಇಂಡಿಯಾ ಸಿನಿ ಶೆಟ್ಟಿ - ಉಂಡಾರು ದೇವಳಕ್ಕೆ ಭೇಟಿ
Thumbnail
ಕಾಪು : ಮಿಸ್ ಇಂಡಿಯಾ ಪಟ್ಟವನ್ನು ಗೆದ್ದು ಮನೆಮಾತಾಗಿರುವ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಮಡುಂಬುವಿನ ಸದಾನಂದ ಶೆಟ್ಟಿ ಮತ್ತು ಹೇಮ ಶೆಟ್ಟಿ ದಂಪತಿಗಳ ಪುತ್ರಿ ಸಿನಿ ಶೆಟ್ಟಿಯವರು ತನ್ನ ಹುಟ್ಟೂರಿನ ಗ್ರಾಮ ದೇವರಾಗಿರುವ ಉಂಡಾರು ವಿಷ್ಣುಮೂರ್ತಿ ದೇವರ ಸನ್ನಿಧಾನಕ್ಕೆ ಆಗಮಿಸಿ ದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿನಿ ಶೆಟ್ಟಿ ಕುಟುಂಬಸ್ಥರು, ಗ್ರಾಮಸ್ಥರು ಸೇರಿದಂತೆ ದೇವಳದ ಕಮಿಟಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು
02 Aug 2022, 06:09 PM
Category: Kaup
Tags: