ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮ
Thumbnail
ಕಟಪಾಡಿ : ಶ್ರೀ ದುರ್ಗಾಪರಮೇಶ್ವರಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಅಗ್ರಹಾರ ಕಟಪಾಡಿ ಇಲ್ಲಿ 75ನೇ ವರ್ಷದ ಸ್ವಾತಂತ್ರದ ಅಮೃತ ಮಹೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೈ ಭರತ್ ಹೆಗ್ಡೆ ಹಾಗೂ ಶಾಲಾ ಸಂಚಾಲಕರಾದ ರಂಜನ್ ಹೆಗ್ಡೆ ನೆರವೇರಿಸಿದರು. 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸರೋಜಿನಿ, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್, ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದ ಅಧ್ಯಕ್ಷರಾದ ದಿಲೀಪ್, ಕೋಶಾಧಿಕಾರಿ ಅರ್ಜುನ್,ಸದಸ್ಯರಾದ ಸಂತೋಷ್ ಪೂಜಾರಿ, ರಮೇಶ್, ಗಿರಿಧರ್, ಕರುಣಾಕರ್ ಶೆಟ್ಟಿ,ಸಂತೋಷ್.ಎನ್. ಎಸ್. ಕಟಪಾಡಿ, ದೀಪಕ್ ದುರ್ಗಾನಗರ, ಅಂಗನವಾಡಿ ಶಿಕ್ಷಕಿಯರಾದ ಸುಮ, ಸಹಾಯಕಿಯರಾದ ಮೋಹಿನಿ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಕಿ ತಿಲಕ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Additional image
15 Aug 2022, 11:22 PM
Category: Kaup
Tags: