ಬಂಟಕಲ್ಲು: ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದ ಸತ್ಯ ಸಾಯಿ ಪ್ರಸಾದ್ ರಿಗೆ ನಾಗರಿಕ ಸಮಿತಿಯಿಂದ ಅಭಿನಂದನೆ
Thumbnail
ಬಂಟಕಲ್ಲು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸರಕಾರಿ ಪ್ರಾರ್ಥಮಿಕ ಶಾಲೆ ರಾಜೀವ ನಗರ ಉಡುಪಿ ಇಲ್ಲಿಯ ಹಿರಿಯ ಶಿಕ್ಷಕ ಶ್ರೀ ಸತ್ಯ ಸಾಯಿ ಪ್ರಾಸಾದ್ ಬಂಟಕಲ್ಲು ಇವರು ಶಿಕ್ಷಕರ ದಿನಾಚರಣೆಯ ಸಂಧರ್ಭದಲ್ಲಿ ಅತ್ಯುತ್ತಮ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪಡೆದಿರುತ್ತಾರೆ. ಇವರನ್ನು ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರು ಶಿಕ್ಷಕ ಸತ್ಯ ಸಾಯಿ ಪ್ರಸಾದ್ ರವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರು ಪ್ರಸಾದ್ ರವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಪೇಟ ತೊಡಿಸಿ ಸನ್ಮಾನಿಸಿ ಅಭಿನಂದಿಸಿ ಈ ನಿಮ್ಮ ಪ್ರಶಸ್ತಿ ನಮ್ಮ ಊರಿಗೆ, ಗ್ರಾಮಕ್ಕೆ ಹೆಮ್ಮೆಯ ವಿಷಯವಾಗಿದ್ದು ಮುಂದೆ ರಾಜ್ಯಪ್ರಶಸ್ತಿ ದೊರೆಯುವಂತಾಗಲಿ ಎಂದು ಶುಭಹಾರೈಸಿದರು. ಸಮಿತಿಯ ಉಪಾಧ್ಯಕ್ಷರಾದ ಪುಂಡಲೀಕ ಮರಾಠೆಯವರು ಪ್ರಸಾದ್ ರವರ ಸೇವೆಯನ್ನು ಶ್ಲಾಘಿಸಿ ಶುಭಹಾರೈಸಿದರು. ಇನ್ನೋರ್ವ ಉಪಾಧ್ಯಕ್ಷರಾದ ಮಾಧವ ಕಾಮತ್, ಸಮಿತಿ ಕಾರ್ಯದರ್ಶಿ ದಿನೇಶ್ ದೇವಾಡಿಗ, ಸದಸ್ಯರಾದ ಉಮೇಶ್ ರಾವ್, ಹರೀಶ್ ಹೇರೂರು, ಡೆನಿಸ್ ಡಿ' ಸೋಜ ಹಾಗೂ ಇಂದಿರಾ ಪ್ರಸಾದ್ ರವರು ಉಪಸ್ಥಿತರಿದ್ದರು.
06 Sep 2022, 07:09 PM
Category: Kaup
Tags: