ಕುತ್ಯಾರು : 'ಇಂದ್ರಪುರ ಅಂಗನವಾಡಿ' ಗೆ ಕುಡಿಯುವ ನೀರಿನ ಯಂತ್ರ ನೀಡಿದ ಪವನ್ ಕುಮಾರ್
Thumbnail
ಶಿರ್ವ ಮಂಚಕಲ್ಲಿನ ಕುತ್ಯಾರು ರಸ್ತೆಯಲ್ಲಿರುವ "ಇಂದ್ರಪುರ ಅಂಗನವಾಡಿ" ಕೇಂದ್ರಕ್ಕೆ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಮಾಜ ಸೇವಕ ಪವನ್ ಕುಮಾರ್ ಅವರು ಸುಮಾರು 8000 ರೂಪಾಯಿ ಮೌಲ್ಯದ ಕುಡಿಯುವ ನೀರಿನ ಯಂತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಮಾತನಾಡಿದ ಪವನ್ ಕುಮಾರ್ ಅವರು ಕರೋನದಿಂದ ಜನರು ಕಂಗಾಲಾಗಿದ್ದು, ಆರೋಗ್ಯದ ಕಡೆ ತುಂಬಾ ಜಾಗ್ರತೆಯನ್ನು ವಹಿಸುತ್ತಾರೆ. ಅದರಲ್ಲೂ ಮುಖ್ಯವಾಗಿ ಮಕ್ಕಳು. ಆದ ಕಾರಣ ಮಕ್ಕಳ ಆರೋಗ್ಯ ದೃಷ್ಟಿಯಿಂದ ಕುಡಿಯುವ ನೀರಿನ ಯಂತ್ರವನ್ನು ನೀಡಿರುತ್ತೆನೆಂದು ತಿಳಿಸಿದರು.. ಈ ಸಂಧರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸುನಿತಾ ಪೂಜಾರಿ ಹಾಗೂ ಸಹಾಯಕಿ ಪ್ರಭಾ ಅವರು ಉಪಸ್ಥಿತರಿದ್ದರು.. ಪವನ್ ಅವರ ಈ ಕಾರ್ಯಕ್ಕೆ ಶಿಕ್ಷಕರು ಪ್ರಸಂಶಿದರು.
14 Jun 2020, 09:01 PM
Category: Kaup
Tags: