ಅಕ್ರಮ ಕಸಾಯಿಖಾನೆ - ಶಿರ್ವ ಪೋಲಿಸರ ದಾಳಿ
ಕಾಪು : ತಾಲೂಕಿನ ಬೆಳಪು ಗ್ರಾಮದ ಹಾಜಿಗೇಟ್ ಬಳಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಯ ಮಾಹಿತಿಯ ಮೇರೆಗೆ ಶಿರ್ವ ಪೋಲಿಸರು ಮಿಂಚಿನ ದಾಳಿ ನಡೆಸಿ ಗೋಮಾಂಸ ಮತ್ತು ಕರುಗಳನ್ನು ವಶಪಡಿಸಿಕೊಂಡು ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಗೋಮಾಂಸ ಮಾಡಲು ಉಪಯೋಗಿಸುತ್ತಿದ್ದ ಪರಿಕರಗಳು, ಗೋಮಾಂಸ ವಶ ಪಡಿಸಿಕೊಂಡಿರುವ ಪೋಲಿಸರು ಒಂದು ಕರುವನ್ನು ರಕ್ಷಿಸಲಾಗಿದ್ದು 3 ದ್ವಿಚಕ್ರ ವಾಹನಗಳನ್ನು ವಶ ಪಡೆದುಕೊಂಡಿದ್ದಾರೆ.
ಆರೋಪಿಗಳು ದನದ ಮಾಂಸ ಮಾರಿ ಬಂದ ಹಣವನ್ನು ಹಬ್ಬಕ್ಕಾಗಿ ಖರ್ಚು ಮಾಡಿದ್ದೇವೆ ಎಂದು ಪೋಲಿಸರಿಗೆ ತಿಳಿಸಿದ್ದು, ಕದ್ದು ತಂದ ಸ್ಥಳದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
