ಕಾಪುವಿನಿಂದ ಮುಲ್ಕಿಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಚಾಲನೆ
ಕಾಪು : ಇಲ್ಲಿನ ಕೊಂಕಣಿಮಠ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಚಾಲನೆ ನೀಡಲಾಯಿತು.
ಬಳಿಕ ಶ್ರೀ ಹಳೆಮಾರಿಗುಡಿಗೆ ತೆರಳಿ ಮುಲ್ಕಿಯತ್ತ ಪಾದಯಾತ್ರೆ ಸಾಗಿತು. ಈ ಪಾದಯಾತ್ರೆ ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳಕ್ಕೆ ಭೇಟಿ ನೀಡಿ ಬಳಿಕ ಹೆಜಮಾಡಿ ಲಕ್ಷ್ಮೀ ನಾರಾಯಣ ದೇವಸ್ಥಾನ ಆಗಿ ಟೋಲ್ ಗೇಟ್ ನಿಂದ ಹೊರೆ ಕಾಣಿಕೆಯೊಂದಿಗೆ ಮುಲ್ಕಿ ಒಳಲಂಕೆ ನರಸಿಂಹ ಸನ್ನಿಧಿಯಲ್ಲಿ ಸಮಾಪನ ಗೊಂಡು ಅಲ್ಲಿ ಜರಗುವ ದ್ವಾದಶ ಕೋಟಿ ರಾಮನಾಮ ತಾರಕ ಜಪಮಂತ್ರ ಯಾಗದಲ್ಲಿ ಪಾಲ್ಗೊಳ್ಳಲಿದೆ.
ಕಾಪುವಿನ ದೇವಳದ ಆಡಳಿತ ಮಂಡಳಿಯ ಸದಸ್ಯರು ಮತ್ತು ಜಿ.ಎಸ್.ಬಿ ಸಮಾಜದ ಭಜಕರು ಪಾಲ್ಗೊಂಡಿದ್ದರು.
