ಫಲಿಮಾರು : ದೇವಳದ ಜೀರ್ಣೋದ್ಧಾರ ಸಹಾಯಾರ್ಥವಾಗಿ ನಾಟಕ ಪ್ರದರ್ಶನ
Thumbnail
ಫಲಿಮಾರು : ಶ್ರೀ ಬ್ರಹ್ಮಲಿಂಗೇಶ್ವರ ಬ್ರಹ್ಮಸ್ಥಾನ, ಕೊಡಂಚಾಲ, ಅವರಾಲು, ವಯಾ ಹೆಜಮಾಡಿ, ಫಲಿಮಾರು ಗ್ರಾಮ, ಉಡುಪಿ ಜಿಲ್ಲೆ ಇದರ ಜೀರ್ಣೋದ್ಧಾರ ಸಹಾಯಾರ್ಥವಾಗಿ ನವಂಬರ್ 5 ರ ಶನಿವಾರ ಸಂಜೆ 4.30 ಕ್ಕೆ ಸಂತಕ್ರೂಜ್ ನ ಬಿಲ್ಲವ ಭವನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿರುವ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ " ನಾಯಿದ ಬೀಲ..." ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ. ಕ್ಷೇತ್ರದ ಭಕ್ತಾಭಿಮಾನಿಗಳು ಹಾಗೂ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯ ಕಾರ್ಯಕ್ಕೆ ಕೈ ಜೋಡಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಟಿಕೆಟ್ ಗಾಗಿ ಸಂಪರ್ಕಿಸಿ : ರವೀಂದ್ರ ಶಾಂತಿ : 9892865119, ಸುನಿಲ್ ಫಲಿಮಾರ್ : 9930029387 ಸಂತೋಷ್ ಸಾಲ್ಯಾನ್ : 7977286528
01 Nov 2022, 10:05 PM
Category: Kaup
Tags: