ಉಡುಪಿಯಲ್ಲಿ ಆದಿತ್ಯವಾರವೇ ಸೆಲೂನ್'ಗಳಿಗೆ ರಜೆ ಸವಿತಾ ಸಮಾಜದ ನಿರ್ಧಾರ
Thumbnail
ಉಡುಪಿ. 26, ಜೂನ್ : ದಿನಾಂಕ 02/06/2020 ರಂದು ಜಿಲ್ಲಾ ಸವಿತಾ ಸಮಾಜದ ಏಳು ತಾಲೂಕಿನ ಸವಿತಾ ಸಮಾಜದ ಅಧ್ಯಕ್ಷರು, ವಲಯ ಘಟಕದ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕೊರೊನ ನಿಮಿತ್ತ ಸೆಲೂನ್ ಗಳಿಗೆ ಭಾನುವಾರ ರಜೆ ಮಾಡಿ ಮಂಗಳವಾರ ತೆರೆದಿಡುವಂತೆ ತೆಗೆದುಕೊಂಡ ನಿರ್ಣಯದಂತೆ ಈಗಾಗಲೇ ನಾಲ್ಕು ಭಾನುವಾರ ರಜೆ ಆಗಿದ್ದರು ಉಡುಪಿ ನಗರದ ಮಣಿಪಾಲ ಮತ್ತು ಶಿರ್ವ ಮುದರಂಗಡಿಯಲ್ಲಿ ಕೆಲವು ಮಾಲೀಕರ ಅಸಹಕಾರದಿಂದ ಸಮಸ್ಯೆ ಆಗಿರುವುದನ್ನು ಮನಗಂಡು ಇಂದು ಎಲ್ಲಾ ಜಿಲ್ಲಾ ಸವಿತಾ ಸಮಾಜದ ಸಮಾಲೋಚನಾ ಸಭೆ ನಡೆಯಿತು. ಸಾಮಾಜಿಕ ಸ್ವಾಸ್ಥ್ಯ ಹಾಗೂ ಕ್ಷೌರಿಕರ ಆರೋಗ್ಯವನ್ನು ಕಾಪಾಡುವುದು ಅದರೊಂದಿಗೆ ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುವುದರೊಂದಿಗೆ ಎಲ್ಲಾದರೂ ಭಾನುವಾರ ಸೆಲೂನ್ ಗಳಲ್ಲಿ ಒತ್ತಡ ಜಾಸ್ತಿಯಾಗಿ ನಿಯಮಾವಳಿಗಳನ್ನು ಪಾಲಿಸಲು ಆಗದೇ ಕ್ಷೌರ ವೃತ್ತಿ ನಿಭಾಯಿಸಲು ಕಷ್ಟ ಸಾಧ್ಯವಾಗಿರುವುದರಿಂದ ಸದ್ಯದ ಮಟ್ಟಿಗೆ ಭಾನುವಾರವೇ ರಜೆ ಮಾಡಿ ಮಂಗಳವಾರ ತೆರೆದು ಹಿಂದೆ ನಿರ್ಧರಿಸಿದಂತೆ ಮುಂದುವರಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು, ಆದ್ದರಿಂದ ಸಮಾಜದ ಸಂಘಟನೆಯ ವಿರುದ್ಧವಾಗಿ ಕೆಲವರು ಸೆಲೂನ್ ಗಳನ್ನು ತೆರೆದಿಟ್ಟರು ಸಾರ್ವಜನಿಕರು, ಹಿರಿಯರ, ಮಕ್ಕಳ ಮತ್ತು ತಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಭಾನುವಾರ ಸೆಲೂನ್ಗಳಿಗೆ ತೆರಳದೆ ವಾರದ ಇತರ ದಿನಗಳಲ್ಲಿ ಸೇವೆ ಪಡೆಯುವಂತೆ ಜಿಲ್ಲಾ ಸವಿತಾ ಸಮಾಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
26 Jun 2020, 09:26 PM
Category: Kaup
Tags: