ಉಡುಪಿ ನಗರಾಭಿವೃದಿ ಪ್ರಾಧಿಕಾರ ನೂತನ ಪದಾಧಿಕಾರಿಗಳ ಆಯ್ಕೆ
Thumbnail
ಉಡುಪಿ. 29, ಜೂನ್ : ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ ಕೆ. ರಾಘವೇಂದ್ರ ಕಿಣಿಯವರನ್ನು ಮತ್ತು ಪ್ರಾಧಿಕಾರದ ನೂತನ ಸದಸ್ಯರನ್ನು ಇಂದು ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಛೇರಿಯಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಅಭಿನಂದಿಸಿ ಶುಭ ಹಾರೈಸಲಾಯಿತು. ಉಡುಪಿಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಮತ್ತು ಸಹಭಾಗಿತ್ವದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದರು. ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು, ಉದಯ ನಾಯ್ಕ್ ಉಪಸ್ಥಿತರಿದ್ದರು.
29 Jun 2020, 08:52 PM
Category: Kaup
Tags: