ನಿವೃತ್ತ ಶಿಕ್ಷಕ ಗೋಪಾಲಕೃಷ್ಣ ಭಟ್ ಕೆ. ಎಮ್ ಇವರ ಗುರುವಂದನಾ ಕಾರ್ಯಕ್ರಮಕ್ಕಾಗಿ ಸಜ್ಜಾಗಿದೆ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರು
ಕಾಪು : ಗೋಪಾಲಕೃಷ್ಣ ಭಟ್ ಕೆ. ಎಮ್ ದೂರದ ಕಾಸರಗೋಡುವಿನ ಸಂಪ್ರದಾಯಸ್ಥ ಮನೆತನದ ಪರಮೇಶ್ವರ ಭಟ್ ಮತ್ತು ಸುಮತಿ ದಂಪತಿಗಳ ಪುತ್ರರಾಗಿ ಜನಿಸಿದ ಶ್ರೀಯುತರು ಬಾಲ್ಯದ ವಿದ್ಯಾಭ್ಯಾಸವನ್ನು ತನ್ನ ಊರಿನಲ್ಲಿ ಪಡೆದರು. ಇವರ ಕುಟುಂಬವು ಕೂಡ ಶಿಕ್ಷಕ ಕುಟುಂಬವೆಂದು ಹೇಳಿದರೂ ಅತಿಶಯೋಕ್ತಿಯಾಗಲಾರದು. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ಗಾದೆ ಮಾತು ಇವರಿಗೆ ಎಲ್ಲಾ ವಿಧದಲ್ಲೂ ಸಲ್ಲುತ್ತದೆ. ವಿದ್ಯಾರ್ಥಿ ಜೀವನದಲ್ಲಿಯೇ ಗಣಿತ ಹಾಗೂ ವಿಜ್ಞಾನದ ಬಗ್ಗೆ ಅಪಾರ ಅನುಭವ ಹೊಂದಿ ಆ ಅನುಭವವನ್ನು ಮೈಗೂಡಿಸಿಕೊಂಡ ಹಿರಿಮೆ ಇವರದ್ದು. ಇವರು ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಗೆ 1986 ರಲ್ಲಿ ಅಧ್ಯಾಪಕರಾಗಿ ಸೇರಿ ಗಣಿತ ಪಾಠ ಮಾಡುವುದರಲ್ಲಿ ವರ್ಷದಿಂದ ವರ್ಷಕ್ಕೆ ಎತ್ತರಕ್ಕೆ ಏರುತ್ತಾ ಹೋದರು. ಉಡುಪಿ ಜೆಲ್ಲೆಯಲ್ಲಿ ಸತತವಾಗಿ ಮೂರು ಬಾರಿ ಎಸ್ ಎಸ್ ಎಲ್ ಸಿ ಗಣಿತದಲ್ಲಿ ಸರಾಸರಿ ಅಂಕಗಳಲ್ಲಿ ಪ್ರಥಮ, ಉಡುಪಿ ಜಿಲ್ಲಾ ಸಾಧಕ ಶಿಕ್ಷಕ ಪ್ರಶಸ್ತಿ, ತನ್ನೂರಿನ ಹಾಗೂ ಅನೇಕ ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿದೆ.
ನಿವೃತ್ತ ನೆಚ್ಚಿನ ಶಿಕ್ಷಕ ಗೋಪಾಲಕೃಷ್ಣ ಭಟ್ ಕೆ.ಎಮ್ ಇವರಿಗೆ ಶಾಲಾ ಹಳೆ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳೆಲ್ಲ ಸೇರಿ ಅದ್ದೂರಿ ಗುರುವಂದನಾ ಕಾರ್ಯಕ್ರಮ ಮಾರ್ಚ್ 3ರಂದು ನಡೆಯಲಿದೆ.
ಜಾತಿ, ಧರ್ಮ, ಪಕ್ಷ , ಪಂಗಡ ಇವೆಲ್ಲವುಗಳನ್ನು ಮರೆತು ಎಲ್ಲರಿಗೂ ಸಮಾನತೆ, ಸೌಹಾರ್ದತೆ, ಸಹ ಬಾಳ್ವಿಕೆಯನ್ನು ಕಲಿಸಿ ಕೊಡುವ ಪಿ.ಕೆ.ಎಸ್ ಪ್ರೌಢಶಾಲೆ ಕಳತ್ತೂರಿನ ಈ ಅದ್ದೂರಿ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾಗೋಣ.
✍️ ಉದಯ ಕುಲಾಲ್
ವರದಿಗಾರರು
ನಮ್ಮ ಕಾಪು ನ್ಯೂಸ್
