ಕಾಪು : ಶಂಕರಪುರದಲ್ಲಿ ವಿಶ್ವ ಆರೋಗ್ಯ ದಿನಾಚರಣೆ
ಕಾಪು : ರೋಟರಿ ಕ್ಲಬ್ ಶಂಕರಪುರ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿ ಜಂಟಿಯಾಗಿ ವಿಶ್ವ ಆರೋಗ್ಯ ದಿನಾಚರಣೆಯನ್ನು ರೋಟರಿ ಭವನ ಶಂಕರಪುರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿ ಇದರ ಅಧ್ಯಕ್ಷರಾದ ಡಾ. ಪಿವಿ ಭಂಡಾರಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ವಿಶ್ವ ಆರೋಗ್ಯ ದಿನಾಚರಣೆ ಹೇಗೆ ಪ್ರಾರಂಭವಾಯಿತು, ಆರೋಗ್ಯವೇ ಭಾಗ್ಯ ಎಂಬ ಉಪಯುಕ್ತ ಮಾಹಿತಿಗಳನ್ನು ನೀಡಿದರು.
ಸನ್ಮಾನ : ಆಫೀಸರ್ ಇನ್ ಪಿ ಹೆಚ್ ಸಿ ಮೂಡಬೆಟ್ಟುವಿನ ಅನಿತಾ ಫರ್ನಾಂಡಿಸ್, ಆಶಾ ಕಾರ್ಯಕರ್ತೆ ಗಾಯತ್ರಿ ಇವರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಕೇಶವ ನಾಯಕ್ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಕಾರ್ಯದರ್ಶಿ ಡಾ. ಕೇಶವ ನಾಯಕ್, ಡಾ. ಶ್ರೀನಿವಾಸ್ ಭಟ್, ರೋಟರಿಯ ಕಾರ್ಯದರ್ಶಿ ಸಿಲ್ವಿಯಾ ಕಾಸ್ಟಲಿನೋ ಹಾಗೂ ರೋಟರಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವಿಕ್ಟರ್ ಮಾರ್ಟಿಸ್ ಪ್ರಾರ್ಥಿಸಿದರು.
ರೋಟರಿ ಅಧ್ಯಕ್ಷರಾದ ಗ್ಲಾಡಸನ್ ಕುಂದರ್ ಸ್ವಾಗತಿಸಿದರು.
