ಪಡುಬಿದ್ರಿ : ಚುನಾವಣೆಯ ಪ್ರಯುಕ್ತ ಪೋಲಿಸ್ ಪಥಸಂಚಲನ
Thumbnail
ಪಡುಬಿದ್ರಿ : ವಿಧಾನಸಭಾ ಚುನಾವಣೆಯ ಪ್ರಯುಕ್ತ ಪಡುಬಿದ್ರಿಯಲ್ಲಿ ಶಿರ್ವ, ಕಾಪು, ಪಡುಬಿದ್ರಿ ಪೋಲಿಸರು ಹಾಗೂ ಸಿ ಆರ್ ಪಿ ತಂಡದಿಂದ ಇಂದು ಸಂಜೆ ಪಥಸಂಚಲನ ನಡೆಯಿತು. ಪಥಸಂಚಲನವು ಕಾರ್ಕಳ ರಸ್ತೆಯಿಂದ ಮೊದಲ್ಗೊಂಡು ಪಡುಬಿದ್ರಿ ಪೇಟೆಯ ಮಾರ್ಗವಾಗಿ ಪಡುಬಿದ್ರಿ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿ ಹಿಂತಿರುಗಿದೆ. ಈ ಸಂದರ್ಭ ಕಾರ್ಕಳ ಡಿ ವೈ ಎಸ್ ಪಿ ಅರವಿಂದ ಕಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ ಸಿ ಪುವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್, ಶಿರ್ವ ಠಾಣಾಧಿಕಾರಿ ರಾಘವೇಂದ್ರ ಸಿ ಹಾಗೂ ಮೂರು ಠಾಣೆಯ ಪೊಲೀಸರು ಉಪಸ್ಥಿತರಿದ್ದರು.
Additional image
11 Apr 2023, 11:00 PM
Category: Kaup
Tags: