ಉಚ್ಚಿಲ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ - ಬಿಜೆಪಿ ಕಾಪು ತಾಲೂಕು ಅಧ್ಯಕ್ಷನ ವಿರುದ್ಧ ದೂರು
ಉಚ್ಚಿಲ : ಇಲ್ಲಿನ ಸಭಾಂಗಣವೊಂದರಲ್ಲಿ ಬಿಜೆಪಿ ವತಿಯಿಂದ ನಡೆದ ಸಭೆಯಲ್ಲಿ ಕಾಪು ತಾಲೂಕು ಬಿಜೆಪಿ ಪಕ್ಷದ ಅಧ್ಯಕ್ಷ ಯಾವುದೇ ಅನುಮತಿ ಪಡೆಯದೇ ಸುಮಾರು100 ಜನರಿಗೆ ಉಪಹಾರ ವಿತರಿಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಘಟನೆ ಆದಿತ್ಯವಾರ ನಡೆದಿದೆ
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ 121-ಕಾಪು ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ 3 ನೇ ತಂಡದ ಅಧಿಕಾರಿಯಾಗಿರುವ ಮುಸ್ತಾಫ್ ರವರಿಗೆ ಜಿಲ್ಲಾಧಿಕಾರಿಗಳ ಕಛೇರಿ ಚುನಾವಣಾ ವಿಭಾಗದಿಂದ ಬಂದ ದೂರಿನಂತೆ ಕಾಪು ತಾಲೂಕು ಬಡಾ ಗ್ರಾಮ ಉಚ್ಚಿಲದಲ್ಲಿರುವ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಆಯೋಜಿಸಿರುವ ಸಭೆಯಲ್ಲಿ ಭಾಗವಹಿಸುತ್ತಿರುವ ವ್ಯಕ್ತಿಗಳಿಗೆ ಕಾಪು ತಾಲೂಕು ಭಾರತೀಯ ಜನತಾ ಪಕ್ಷದ ಅಧ್ಯಕ್ಷರಾದ ಶ್ರೀಕಾಂತ್ನಾಯಕ್ ರವರು ಯಾವುದೇ ಅನುಮತಿ ಪಡೆಯದೇ ಉಪಾಹಾರದ ವ್ಯವಸ್ಥೆ ಮಾಡಿದ್ದ ಬಗ್ಗೆ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
