ಚುನಾವಣಾ ನೀತಿ‌ ಸಂಹಿತೆ ‌ಉಲ್ಲಂಘನೆ : ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲು
Thumbnail
ಕಾಪು : ಚುನಾವಣಾಧಿಕಾರಿಯ ಅನುಮತಿ ಪಡೆಯದೆ ಚುನಾವಣೆ ನಾಮಪತ್ರ ಸಲ್ಲಿಕೆಯ ನಂತರ ಬಂದಂತಹ ಕಾರ್ಯಕರ್ತರಿಗೆ ಭೋಜನ ಮತ್ತು ನೀರನ್ನು ವಿತರಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮೇಲೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾಧಿಕಾರಿಗಳ  ಪ್ಲೈಯಿಂಗ್‌ ಸ್ಕ್ವಾಡ್ ತಂಡ ಕಾಪುವಿನಲ್ಲಿ ಗಸ್ತು ಮಾಡುತ್ತಿರುವ ಸಮಯದಲ್ಲಿ  ‌ಮಧ್ಯಾಹ್ನ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ  ಚುನಾವಣಾ  ವಿಭಾಗದಿಂದ  ಬಂದ ಕರೆಯಂತೆ  ಸಿ-ವಿಜಿಲ್‌ ದೂರಿನಂತೆ  ಕಾಂಗ್ರೆಸ್‌ ಪಕ್ಷದ  ವತಿಯಿಂದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಲುವಾಗಿ ನಡೆದ ರ‍್ಯಾಲಿ ಬಳಿಕ ಕಾಪುವಿನಲ್ಲಿರುವ  ರಾಜೀವ ಸಭಾ ಭವನ  ಇಲ್ಲಿ ಭಾಗವಹಿಸಿದ ಕಾಯ೯ಕತ೯ರಿಗೆ ಕಾಪು ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿಯಿಂದ ಅನುಮತಿಯನ್ನು ಪಡೆಯದೇ ಸುಮಾರು 1000 ಜನರಿಗೆ ಭೋಜನ  ಹಾಗೂ  ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದು ಅದನ್ನು ಪಕ್ಷದ ಕಾಯ೯ಕತ೯ರಿಗೆ ವಿತರಿಸುತ್ತಿದ್ದು ಕಂಡು ಬಂದಿದ್ದು, ಜಾಥ ನಡೆಸಲು ಅನುಮತಿ ಪಡೆದುಕೊಂಡ ಕಾಪು ಬ್ಲಾಕ್‌ ಕಾಂಗ್ರೆಸ್‌ ದಕ್ಷಿಣದ ಅಧ್ಯಕ್ಷ ನವೀನ್‌ ಚಂದ್ರ ಸುವಣ೯ ಮೇಲೆ  ಚುನಾವಣಾ ನೀತಿ ಸಂಹಿತೆ  ಉಲ್ಲಂಘನೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ  ಜರುಗಿಸುವಂತೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
19 Apr 2023, 10:58 PM
Category: Kaup
Tags: