ಕಾಪು : ಪಡು ಗ್ರಾಮ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮತಯಾಚನೆ
Thumbnail
ಕಾಪು : ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯ ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್ ಹಾಗೂ ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ನವೀನ್ ಎಸ್ ಕೆ, ಕುಶ ಸಾಲ್ಯಾನ್, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
23 Apr 2023, 05:18 PM
Category: Kaup
Tags: