ಕಾಪು : ಶ್ರೀ ದೇವಿ ಫ್ರೆಂಡ್ಸ್ ಕಾಪು ಮಲ್ಲಾರ್ ರಾಣ್ಯಕೇರಿ - ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪುಸ್ತಕ ವಿತರಣೆ ಸಮಾರಂಭ
Thumbnail
ಕಾಪು : ಶ್ರೀ ದೇವಿ ಫ್ರೆಂಡ್ಸ್ ಕಾಪು ಮಲ್ಲಾರ್ - ರಾಣ್ಯಕೇರಿ ಇದರ ವತಿಯಿಂದ ರಾಣೆ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪುಸ್ತಕ ವಿತರಣೆ ಸಮಾರಂಭವು ಕೋಟೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ಜರಗಿತು. ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ಈ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭ ರಾಣೆ ಸಮಾಜದ ಪ್ರಮುಖರಾದ ಜಯ ರಾಣ್ಯ, ಬಿ ಕೆ ಶ್ರೀನಿವಾಸ್, ರವೀಂದ್ರ ಮಲ್ಲಾರು, ಕೋಟೆ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಮಾಜಿ ಗುರಿಕಾರ ಶೇಖರ ರಾಣ್ಯ, ದರ್ಶನ ಪಾತ್ರಿ ನಾರಾಯಣ, ಅರ್ಚಕರಾದ ಸೋಮನಾಥ, ಮಹಿಳಾ ಮಂಡಳಿ ಕಾರ್ಯದರ್ಶಿ ಗೀತಾ, ಶ್ರೀ ದೇವಿ ಫ್ರೆಂಡ್ಸ್ ಅಧ್ಯಕ್ಷರಾದ ಶರತ್ ಎಸ್, ನಡು ಮಾರಿಯಮ್ಮ ದೇವಸ್ಥಾನದ ಗುರಿಕಾರರಾದ ಬಾಬು, ಶ್ರೀ ದೇವಿ ಫ್ರೆಂಡ್ಸ್ ಇದರ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂದೇಶ್ ಪ್ರಾರ್ಥಿಸಿದರು. ಪ್ರಕಾಶ್ ಎಸ್ ನಿರೂಪಿಸಿದರು.
Additional image Additional image Additional image
04 Jun 2023, 03:30 PM
Category: Kaup
Tags: