ಕಟಪಾಡಿ : ಪಡುಕುತ್ಯಾರು ಆನೆಗುಂದಿ ಶ್ರೀ ಗಳ ಚಾತುರ್ಮಾಸ್ಯ ಜು 5ರಿಂದ ಸೆ.29 ; ಪೂರ್ವಭಾವಿ ಕ್ಷೇತ್ರ ಸಂದರ್ಶನ ಜೂ8ರಿಂದ 29
Thumbnail
ಕಟಪಾಡಿ : ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 19ನೇ ವರ್ಷದ ಶೋಭಕ್ಕೃತ್ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯು 2023 ಜುಲೈ 3 ರಿಂದ ಸೆಪ್ಟಂಬರ್ 29 ರ ವರೇಗೆ ಪಡು ಕುತ್ಯಾರಿನಲ್ಲಿ ನಡೆಯಲಿದೆ. ವರ್ಷಂಪ್ರತಿ ನಡೆಯುವ ಚಾತುರ್ಮಾಸ್ಯ ಪೂರ್ವಭಾವೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇಗುಲಗಳಲ್ಲಿ 2023 ಜೂನ್ 8 ರಿಂದ 29 ರವರೆಗೆ ಅಂಕೋಲಾ, ಕೊಲಕಾಡಿ, ಪಡುಪಣಂಬೂರು, ಹಳೆಯಂಗಡಿ, ಮಂಗಳೂರು, ಮಧೂರು, ಆರಿಕ್ಕಾಡಿ ಕಾರ್ಳೆ,ಬಂಗ್ರ ಮಂಜೇಶ್ವರ, ಕೋಟೆಕಾರು, ಕಾರ್ಕಳ, ಮೂಡಬಿದ್ರೆ, ಗೋಕರ್ಣ, ಭಟ್ಕಳ, ಬಾರ್ಕೂರು, ಉಪ್ರಳ್ಳಿ, ಕಟಪಾಡಿ, ಕಾಪು ಇಲ್ಲಿ ಕ್ಷೇತ್ರ ಸಂದರ್ಶನವು ನಡೆಯಲಿದೆ ಎಂದು ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ ಆಚಾರ್ ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
05 Jun 2023, 05:56 PM
Category: Kaup
Tags: