ಬೈರಂಪಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ
ಕಾಪು : ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬೈರಂಪಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಇಂದು ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಅಭಿನಂದನಾ ಸಮಾರಂಭ ನೆರವೇರಿತು.
ಈ ಸಂದರ್ಭ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳು ಸಾರ್ವಜನಿಕರ ದೂರುಗಳ ನಿವಾರಣೆಗೆ ವಿಳಂಬ ಮಾಡದೆ ತಕ್ಷಣದಲ್ಲಿ ಸ್ಪಂದಿಸಬೇಕು. ವೃತ್ತಿ ಹಾಗೂ ಪ್ರವೃತ್ತಿ ಬೇರೆ ಇರಬಹುದು ಆದರೆ ಈ ಸಮಾಜದ ಕಟ್ಟ ಕಡೆಯ ಜನರಿಗೆ ನಾವು ಧ್ವನಿ ಆಗಬೇಕು ಜೊತೆಗೆ ಸಮಾಜದ ಕಟ್ಟ ಕಡೆಯ ಜನರ ಕಣ್ಣೀರು ಒರೆಸುವ ಕಾರ್ಯ ನಮ್ಮಿಂದಾಗಬೇಕು. ಸರಕಾರದ ಮತ್ತು ಸಮಾಜದ ಒಬ್ಬ ಸೇವಕನಾಗಿ, ಪ್ರತಿನಿಧಿಯಾಗಿ ಸೇವೆ ಮಾಡುವಂತಹ ಅವಕಾಶ ನನಗೆ ಭಗವಂತ ನೀಡಿದ್ದಾರೆ. ಹಾಗಾಗಿ ನಾವು ನೀವೆಲ್ಲರೂ ಒಟ್ಟಾಗಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಉಪಾಧ್ಯಕ್ಷರಾದ ಸುಚೇತಾ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ ಶೆಟ್ಟಿ ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
