ಕಾಪು ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಬಗ್ಗೆ ಶಾಸಕರಿಂದ ಸಭೆ
Thumbnail
ಕಾಪು : ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಖಾಸಗಿ ಪ್ರೌಢಶಾಲಾ ಮಕ್ಕಳಿಗೆ ಶೈಕ್ಷಣಿಕ ವಿದ್ಯಾಭ್ಯಾಸದ ಜೊತೆಗೆ ಕರಾವಳಿಯ ಗಂಡು ಕಲೆ ಎಂದು ಪ್ರಸಿದ್ಧಿ ಪಡೆದ ಯಕ್ಷಗಾನ ಕಲೆಯನ್ನು ಕಲಿಸುವ ನಿಟ್ಟಿನಲ್ಲಿ ಶನಿವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಶಾಸಕರ ಕಚೇರಿಯಲ್ಲಿ ಯಕ್ಷಗಾನ ಕಲಾರಂಗ (ರಿ.) ಇದರ ಪದಾಧಿಕಾರಿಗಳೊಂದಿಗೆ ಮತ್ತು ಶಾಲಾ ಮುಖ್ಯೋಪಾಧ್ಯಾಯರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಅವರು ಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಮಕ್ಕಳ ನೈತಿಕ ಮೌಲ್ಯ ಹಾಗೂ ಜ್ಞಾನ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗ (ರಿ.) ಅಧ್ಯಕ್ಷರಾದ ಎಂ. ಗಂಗಾಧರ್ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಜೊತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು.
Additional image
24 Jun 2023, 09:59 PM
Category: Kaup
Tags: