ಹೆಜಮಾಡಿ : ಪಂಚಾಯತ್ನಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಇ - ಕೆವೈಸಿ ಜೋಡಣಾ ಕಾರ್ಯಕ್ರಮ
Thumbnail
ಹೆಜಮಾಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಇ - ಕೆವೈಸಿ ಜೋಡಣೆಯ ಕಾರ್ಯಕ್ರಮ ಇಂದು ನಡೆಯಿತು. ಸಹಾಯಕ ಕೃಷಿ ನಿರ್ದೇಶಕರಾದ ಮೋಹನ್ ರಾಜ್ ಇ- ಕೆವೈಸಿ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ‌ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಬಬಿತ, ಕಾರ್ಯದರ್ಶಿ ದೀಪ, ಕೃಷಿ ಇಲಾಖೆಯ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.
27 Jun 2023, 05:43 PM
Category: Kaup
Tags: