ಉಡುಪಿ : ಜಿಲ್ಲೆಯಾದ್ಯಂತ ಬಕ್ರೀದ್ ಸಂಭ್ರಮಾಚರಣೆ
ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮದಿಂದ ಆಚರಿಸಿದರು.
ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಮಸೀದಿಗಳಲ್ಲಿ ಧರ್ಮಗುರುಗಳು ವಿಶೇಷ ಈದ್ ನಮಾಝ್ ನೆರವೇರಿಸಿ ಈದ್ ಸಂದೇಶ ನೀಡಿದರು.
