ಕಳತ್ತೂರು ಕುಲಾಲ ಒಕ್ಕೂಟ : ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ
Thumbnail
ಕಾಪು : ಕುಲಾಲ ಬಾಂಧವರು ಕಳತ್ತೂರು ಇದರ ವತಿಯಿಂದ ರವಿವಾರ ಜರಗಿದ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಕುಲಾಲ ಬಾಂಧವರು ಕಳತ್ತೂರು ಒಕ್ಕೂಟದ ಅಧ್ಯಕ್ಷರು ರಾಜೇಶ್ ಕುಲಾಲ್ ಪೈಯ್ಯಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ತನಿಸ್ಕ, ರಕ್ಷಿತಾ, ಚಿರಾಗ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಕ್ತಿ ಆರ್ ಕುಲಾಲ್, ಕೋಶಾಧಿಕಾರಿ ಹರೀಶ್ ಕೆ ಮೂಲ್ಯ , ಸಮಾಜದ ಹಿರಿಯರಾದ ತೊತು ಮೂಲ್ಯ, ಪಾಂಡು ಮೂಲ್ಯ, ಶಂಕರ ಮೂಲ್ಯ, ಬಾಡು ಮೂಲ್ಯ, ಸಂಜೀವ ಕುಲಾಲ್, ಒಕ್ಕೂಟದ ಹಿರಿಯ ಗುರಿಕಾರರು, ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
05 Jul 2023, 10:01 AM
Category: Kaup
Tags: