ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ - ವನಮಹೋತ್ಸವ
Thumbnail
ಕಾಪು : ದೇಸಿಕ್ರ್ಯೂ ಸೊಲ್ಯೂಷನ್ಸ್ ಸರ್ವಿಸ್ ಪ್ರೈ.ಲಿಮಿಟೆಡ್ ಇವರ ಆಶ್ರಯದಲ್ಲಿ ‌ಕಾಪುವಿನಲ್ಲಿ‌ ವನಮಹೋತ್ಸವ ಆಚರಿಸಲಾಯಿತು. ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ ಮತ್ತು ಮಂಜುನಾಥ್ ಅತಿಥಿಗಳಾಗಿ‌ ಭಾಗವಹಿಸಿದ್ದರು. ಜೀವನ್ ದಾಸ್ ಶೆಟ್ಟಿ ಮರಗಳ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಸಂಸ್ಥೆಯ ವಿನೋದ್ ರಾವ್ ವನಮಹೋತ್ಸವದ ಕುರಿತು ಮಾತನಾಡಿದರು. ಈ‌ ಸಂದರ್ಭ ಸಂಸ್ಥೆಯ ‌ಉದ್ಯೋಗಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಸಂಸ್ಥೆಯ ಉದ್ಯೋಗಿಗಳಿಗೆ ಹೂವಿನ ಮತ್ತು ಹಣ್ಣಿನ ‌ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮ ಆಯೋಜಕರಾದ ಸಂಸ್ಥೆಯ ರಶ್ಮಿ‌ ಎಸ್ ಎಮ್ ಸ್ವಾಗತಿಸಿದರು. ವೀಣಾ ಶೆಟ್ಟಿ ವಂದಿಸಿದರು.
Additional image
07 Jul 2023, 07:47 PM
Category: Kaup
Tags: