ಮೂಳೂರು : ಸತತ 8ನೇ ವರ್ಷದ ಆಟಿ ಕಷಾಯ ವಿತರಣೆ
Thumbnail
ಮೂಳೂರು : ಹಿಂದೂ ರಕ್ಷಾ ವೆಲ್‌ಫೇರ್ ಟ್ರಸ್ಟ್ ಮೂಳೂರು, ಟ್ರಸ್ಟ್ ಸದಸ್ಯರು ಹಾಗೂ ಸಂಜೀವ ಪೂಜಾರಿ ಸಹಕಾರದೊಂದಿಗೆ ಆಟಿ ಅಮಾವಾಸ್ಯೆಯ ಪ್ರಯುಕ್ತ ಸತತ 8ನೇ ವರ್ಷ ಹಾಳೆ ಮರದ ತೊಗಟೆಯಿಂದ ಮಾಡಿದ ಕಷಾಯವನ್ನು ಸರಕಾರಿ ಸಂಯುಕ್ತ ಶಾಲೆ ಮೂಳೂರಿನಲ್ಲಿ ಉಚಿತವಾಗಿ ವಿತರಿಸುವ ಮೂಲಕ ಈ ಪುರಾತನ ಸಂಪ್ರದಾಯದ ಪ್ರಯೋಜನವನ್ನು ಸುಮಾರು ೧೨೦೦ ಜನರು ಪಡೆದರು. ಗೌರವ ಸಲಹೆಗಾರರಾದ ಅಶೋಕ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ ಪಿ, ಟ್ರಸ್ಟೀ ನಾಗೇಶ್ ಅಮೀನ್, ಸದಸ್ಯರಾದ ದಿನೇಶ್ ಪಾಣರ, ಸುನೀಲ್ ಕರ್ಕೇರ, ಸುಖೇಶ್ ಡಿ ಮೂಳೂರು, ಅಶೋಕ್ ಕರ್ಕೇರ, ಸುಜಯ್ ಕುಕ್ಯನ್, ಅರುಣ್ ಕುಲಾಲ್, ಹವ್ಯಾಸ್ ಪೂಜಾರಿ, ಗಗನ್ ಮೆಂಡನ್, ಪ್ರಜೇಶ್, ಗುರುರಾಜ್ ಪೂಜಾರಿ, ಮನ್ವಿತ್ ಕರ್ಕೇರ, ಜಯೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
17 Jul 2023, 05:24 PM
Category: Kaup
Tags: