ಕಟಪಾಡಿ : ಧ್ವನಿ ಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ - 12 ನೇ ವಾರ್ಷಿಕ ಮಹಾಸಭೆ ; ಪ್ರತಿಭಾ ಪುರಸ್ಕಾರ
ಕಟಪಾಡಿ : ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ 12 ನೇ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 25 ರಂದು ಶಂಕರಪುರದ ಜೆ.ಸಿ ಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಧ್ವನಿ ಬೆಳಕು ಸಂಯೋಜಕರ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
