ಉಡುಪಿ : ಮಹಿಳಾ ಮೀಸಲಾತಿ ಮಾಜಿ‌ ಪ್ರಧಾನಿ ದೇವೇಗೌಡರ ಕನಸಿನ ಕೂಸು - ಯೋಗೀಶ್ ವಿ ಶೆಟ್ಟಿ
Thumbnail
ಉಡುಪಿ : ಲೋಕಸಭೆ ಮತ್ತು ರಾಜ್ಯವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33% ಮೀಸಲಾತಿ ನೀಡುವ ವಿಚಾರವನ್ನು 1996ರಲ್ಲಿ ದೇವೇಗೌಡರು ಪ್ರಧಾನ ಮಂತ್ರಿಗಳಾಗಿದ್ದಾಗ ಪ್ರಸ್ತಾವನೆ ಮಾಡಿದ್ದರು. ಇದು ದೇವೇಗೌಡರ ಕನಸಿನ ಕೂಸು. ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೂ ಆ ಸಂದರ್ಭ ಲೋಕಸಭೆ ಸದಸ್ಯರಾಗಿದ್ದರು. ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇದರ ಬಗ್ಗೆ ಪ್ರಸ್ತಾವನೆ ಮಾಡಿದ್ದು ಸಂತೋಷ ತಂದಿರುತ್ತದೆ. ಇದು ಆದಷ್ಟು ಶೀಘ್ರದಲ್ಲಿ ಜಾರಿಗೆ ಬರಲಿ. ಇದು ಅಭಿವೃದ್ಧಿ ಸಮಾಜ ಸುಧಾರಣೆಯ ಹೊಸ ಹೆಜ್ಜೆ ಮಹಿಳಾ ಮೀಸಲಾತಿಗೆ ಮರು ಜೀವ ತಂದದ್ದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
19 Sep 2023, 09:40 PM
Category: Kaup
Tags: