ಉಡುಪಿ : ತುಳು ಲಿಪಿ ನಾಮ ಫಲಕ ಅನಾವರಣ
ಉಡುಪಿ : ಜೈ ತುಲುನಾಡ್(ರಿ.) ಉಡುಪಿ ವಲಯದ ವತಿಯಿಂದ ಮಣಿಪಾಲದ ಅಕಾಡೆಮಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಲಾದ ತುಳುನಾಡಿನ ನೆಲದ ಭಾಷೆಯಾದ ತುಳು ಲಿಪಿಯ ನಾಮಫಲಕ ವನ್ನು ತುಳುಕೂಟ(ರಿ.) ಉಡುಪಿ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ಇವರು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ದಾಖಲೆ ಆಧಾರದ ಮೇಲೆ ಕಂದಾಯ ಅಧಿಕಾರಿ ನಮಗೆ ಮಾತೃ ಭಾಷೆ ತುಳು ಎಂದು ಸರ್ಟಿಫಿಕೆಟ್ ನೀಡಿದರೆ ಆ ಸರ್ಟಿಫಿಕೇಟ್ ಮೇಲೆ ನೀಟ್, ಸಿಇಟಿಯಲ್ಲಿ ತುಳು ಕೋಟಾದಲ್ಲಿ ರಿಸರ್ವೇಶನ್ ಲಭಿಸುತ್ತದೆ ಹಾಗಾಗಿ ಲಕ್ಷಾಂತರ ರೂಪಾಯಿ ಅನುದಾನ ನೀಡುವುದು ತಪ್ಪುತ್ತದೆ. ಹೆಚ್ಚಿನವರಿಗೆ ನಾನು ಇದರ ಮಾಹಿತಿ ನೀಡಿದ್ದೇನೆ. ಹೆಚ್ಚಿನ ನಮ್ಮ ಸ್ಥಳೀಯ ಮಕ್ಕಳಿಗೆ ಹಾಗೂ ಪೋಷಕರಿಗೆ ಇದರ ಮಾಹಿತಿ ಇಲ್ಲ. ಶಾಲಾ ದಾಖಲಾತಿಯ ಸಮಯದಲ್ಲಿ ಮಾತೃಭಾಷೆ ತುಳು ಎಂದು ನಮೂದಿಸಿದರೆ ಇದರ ಸದುಪಯೋಗ ಪಡೆಯಬಹುದು ಹಾಗೂ ಜೈ ತುಲುನಾಡು(ರಿ.) ಸಂಘಟನೆಯವರು ತುಳು ಭಾಷೆ ಸಂಸ್ಕೃತಿ ಉಳಿವಿಗಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಶ್ರಮಿಸುತ್ತಿದೀರಿ ಇದಕ್ಕೆ ನಾನು ಆಭಾರಿಯಾಗಿದ್ದೇನೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ತಾರಾ ಉಮೇಶ್ ಆಚಾರ್ಯ, ತುಳುನಾಡ ಧ್ವನಿಯ ಸಂಪಾದಕರಾದ ಯಶೋಧಾ ಕೇಶವ್, ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ನಾಯ್ಕ್ , ಜೈ ತುಲುನಾಡ್(ರಿ.) ಇದರ ಉಪಾಧ್ಯಕ್ಷರಾದ ಉದಯ ಪೂಂಜಾ, ಕೋಶಾಧಿಕಾರಿ ಸಂತೋಷ್.ಎನ್.ಎಸ್ ಕಟಪಾಡಿ ಹಾಗೂ ಜೈ ತುಲುನಾಡು(ರಿ.) ಉಡುಪಿ ವಲಯದ ಸದಸ್ಯರಾದ ಸುಪ್ರೀತಾ ದೇವಾಡಿಗ, ಕಿನ್ನು ಒಡಿಪು, ರಾಜೇಶ್ ತುಳುವ, ಸುರೇಶ್ ಹಾವಂಜೆ, ಸಾಗರ್ ಭಂಡಾರಿ, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಸಂಘದ ಸದಸ್ಯರಾದ ಸ್ವಾತಿಸುವರ್ಣ ಕೊಡವೂರು ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
