ಉಚ್ಚಿಲ ದಸರಾ - 2023 ; ಉಡುಪಿ ಜಿಲ್ಲಾಧಿಕಾರಿಯಿಂದ ಚಾಲನೆ
Thumbnail
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಹುಲಿವೇಷ, ಸಾಂಸ್ಕೃತಿಕ ಮೆರುಗಿನ ಜೊತೆಗೆ ಭಕ್ತಿಭಾವದ ಸಂಭ್ರಮವನ್ನು ನವರಾತ್ರಿಯ ಸಂದರ್ಭ ಕಾಣಬಹುದಾಗಿದೆ. ಉಚ್ಚಿಲ ದಸರಾ ಉಡುಪಿಯ ಜನತೆಗೆ ಸಂಭ್ರಮದ ಹಬ್ಬವಾಗಲಿ ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. ನಾಡಿಗೆ ಸುಖ ಸಮದ್ಧಿ ಜನರು ಸುಖ ಸಂತೋಷದಿಂದ ಇರಲಿ ಎಂದು ಶುಭಹಾರೈಸಿದರು. ನವದುರ್ಗೆಯರು ಮತ್ತು ಶ್ರೀ ಶಾರದಾ ಪ್ರತಿಷ್ಠಾಪನೆ ಯೊಂದಿಗೆ ಶಾರದೆಗೆ ಬೆಳ್ಳಿ ವೀಣೆ, ಬೆಳ್ಳಿ ಕಿರೀಟಧಾರಣೆಯು ನಡೆಯಿತು. ಈ ಸಂದರ್ಭದಲ್ಲಿ ದೇವಳದ ವತಿಯಿಂದ ಜಿಲ್ಲಾಧಿಕಾರಿಯವರನ್ನು ಗೌರವಿಸಲಾಯಿತು. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ನವದುರ್ಗೆಯರಿಗೆ ಮಹಾಮಂಗಳಾರತಿ ನಡೆಯಿತು. ಇದೇ ಸಂದರ್ಭ ಅನ್ನಛತ್ರ, ನೂತನ ಅತಿಥಿಗೃಹ, ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಮೀನುಗಾರಿಕಾ ಪರಿಕರಗಳ ಪ್ರದರ್ಶನ, ಛಾಯಾಚಿತ್ರ ಪ್ರದರ್ಶನ, ಪುಸ್ತಕ ಪ್ರದರ್ಶನವನ್ನು ಕ್ಷೇತ್ರದ ಗೌರವ ಸಲಹೆಗಾರರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಿದರು. ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಹಾಯಕ ಕಮೀಷನರ್ ರಶ್ಮಿ ಎಸ್. ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಾಪು ತಹಶೀಲ್ದಾರ್ ನಾಗರಾಜ ನಾಯ್ಕಡ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಕಿದಿಯೂರು ಹೋಟೆಲ್ ಪ್ರೈ.ಲಿ. ನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾರಾಣಿ, ನಾಲ್ಕು ಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಉಪಸ್ಥಿತರಿದ್ದರು. ಡಾ. ಜಿ. ಶಂಕರ್‌ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ ಅಮೀನ್‌ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.
Additional image Additional image Additional image
15 Oct 2023, 12:22 PM
Category: Kaup
Tags: