ಪಲಿಮಾರು : ನಿರಂತರ ಪರಿಶ್ರಮ ಮಾತ್ರ ಯಶಸ್ಸನ್ನು ದೊರಕಿಸಿಕೊಡಬಲ್ಲುದು - ಸುಧಾಕರ್ ಶೆಣೈ
ಪಲಿಮಾರು : ಹಿರಿಯರು ಕಟ್ಟಿ ಬೆಳೆಸಿದ ಸುಂದರ ಸಂಸ್ಥೆ ಪಲಿಮಾರಿನ ಸರಕಾರಿ ವಿದ್ಯಾ ಸಂಸ್ಥೆ. ಎಲ್ಲಾ ರೀತಿಯ ಸೌಕರ್ಯಗಳಿರುವ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಬೇಕು, ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳನ್ನು ಈ ವಿದ್ಯಾಸಂಸ್ಥೆಗೆ ಸೇರಿಸಲು ಮುಂದೆ ಬರಬೇಕು ಎಂಬುದಾಗಿ ಸರಕಾರಿ ಪ್ರೌಢಶಾಲೆಯ ಪಲಿಮಾರು ಇಲ್ಲಿಯ ಕನ್ನಡ ಶಿಕ್ಷಕರಾದ ಸುಧಾಕರ್ ಶೆಣೈ ಹೇಳಿದರು.
ಅವರು ನವೆಂಬರ್ 7ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ನಡೆದ ಪೋಷಕರ ಮತ್ತು ವಿದ್ಯಾರ್ಥಿಗಳ ಸಭೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಅವರಿಗಿಂತ ನಿಮ್ಮ ಜೀವನ ಮಟ್ಟ ಒಳ್ಳೆಯದಾಗಬೇಕು ಎನ್ನುವುದು ನಿಮ್ಮ ಪೋಷಕರ ಅಭಿಲಾಷೆ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸತತ ಪ್ರಯತ್ನ ಮಾಡಿ, ಜೀವನದಲ್ಲಿ ಯಶಸ್ವಿಗಳಾಗಬೇಕು. ಯಶಸ್ಸಿಗೆ ಯಾವುದೇ ಅಡ್ಡ ದಾರಿಗಳಿಲ್ಲ. ನಿರಂತರ ಪರಿಶ್ರಮ ಮಾತ್ರ ಯಶಸ್ಸನ್ನು ದೊರಕಿಸಿಕೊಡಬಲ್ಲುದು ಎಂಬುದಾಗಿ ಅವರು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಮಾತನಾಡಿ, ಪಲಿಮಾರಿನ ವಿದ್ಯಾರ್ಥಿಗಳು ತುಂಬಾ ಶಿಸ್ತು, ವಿನಯ ಮತ್ತು ವಿಧೇಯತೆ ಇರುವ ಮಕ್ಕಳು. ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ ಮಾತ್ರವಲ್ಲ, ತಪ್ಪದೆ ತರಗತಿಗಳಿಗೆ ಹಾಜರಾಗುತ್ತಾರೆ ಎಂಬುದಾಗಿ ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಅಭಿನಂದಿಸಿದರು. ಸಮಯ ಪ್ರಜ್ಞೆಯನ್ನು ಬೆಳೆಸುವಲ್ಲಿ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂಬುದಾಗಿ ಅವರು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರ್ ಮಾತನಾಡಿ, ಸಂಸ್ಥೆಯಲ್ಲಿ ಯಾವುದೇ ಕುಂದು ಕೊರತೆಗಳಿದ್ದಲ್ಲಿ ಪೋಷಕರು ನೇರವಾಗಿ ಕೇಳಬಹುದು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಿ.ಕಾಂ ಮತ್ತು ಎಂ.ಕಾಮ್ ನಲ್ಲಿ ಪ್ರಥಮ ಬ್ಯಾಂಕ್ ಗಳಿಸಿದ ನಿಮ್ಮ ಪ್ರಾಂಶುಪಾಲರನ್ನೇ ಮೀರಿಸು ಸಾಧನೆಯನ್ನು ನೀವು ಮಾಡಬೇಕು ಎಂದು ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರೂ, ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರೂ ಆಗಿರುವ ರಾಯೇಶ್ವರ್ ಪೈ, ಪೋಷಕ ಪ್ರತಿನಿಧಿಗಳಾದ ಪ್ರಸನ್ನ, ತುಳಸಿ, ರೇಖಾ ಹಾಗೂ ನಳಿಸಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಡೆದ ಕಾಪು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಕನ್ನಡ ಉಪನ್ಯಾಸಕಿ ಜ್ಯೋತಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕಿ ಸ್ವಾತಿ ಪ್ರದೀಪ್ ವಂದಿಸಿದರು. ಅರ್ಥಶಾಸ್ತ್ರ ಉಪನ್ಯಾಸಕರು ಜೊತೆ ಜೊತೆ ಸೇರಿ ಒಂದು ಪವಿತ್ರ ಕೆ ಕಾರ್ಯಕ್ರಮ ನಿರೂಪಿಸಿದರು.
