ಉಡುಪಿ : ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಉತ್ತರ ಕನ್ನಡ ಜಿಲ್ಲಾ ವಿಭಾಗ ಇದರ ವತಿಯಿಂದ ಹೊನ್ನಾವರದಲ್ಲಿ ನಡೆಯಲಿರುವ ಕರಾವಳಿ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ಕದಂಬರತ್ನ ಮಯೂರವರ್ಮ ರಾಷ್ಟ್ರೀಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಸಾಮಾಜಿಕ ಕಾರ್ಯಕರ್ತ ರಕ್ತದಾನಿ ರಾಘವೇಂದ್ರ ಪ್ರಭು ಕವಾ೯ಲುರವರು ಆಯ್ಕೆಯಾಗಿದ್ದಾರೆ.
