ಪಡುಬಿದ್ರಿ ರೋಟರಿ ಕ್ಲಬ್ : ಮನೆ ಬೆಳಕು ಕಾರ್ಯಕ್ರಮದಡಿಯಲ್ಲಿ ಗ್ಯಾಸ್ ಸ್ಟವ್, ಸಿಲಿಂಡರ್‌ ಹಸ್ತಾಂತರ
Thumbnail
ಪಡುಬಿದ್ರಿ : ಇಲ್ಲಿನ ರೋಟರಿ ಕ್ಲಬ್ ವತಿಯಿಂದ "ಮನೆ ಬೆಳಕು" ಕಾರ್ಯಕ್ರಮದಡಿ ಪಡುಬಿದ್ರಿ ಪಾದೆಬೆಟ್ಟು ಗ್ರಾಮದ ಸುಮಿತ್ರಾ ಪೂಜಾರಿಯವರಿಗೆ ಗ್ಯಾಸ್ ಸ್ಟವ್ ಮತ್ತು ಸಿಲಿಂಡರ್‌ ನ್ನು ಪೂರ್ವ ಸಹಾಯಕ ಗರ್ವನರ್ ಗಣೇಶ್ ಆಚಾರ್ಯ ಉಚ್ಚಿಲ ಹಸ್ತಾಂತರಿಸಿದರು. ಪಡುಬಿದ್ರಿ ರೋಟರಿ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಲಯ ‌ಸಂಯೋಜಕ ರಮೀಜ್ ಹುಸೇನ್, ನಿಕಟ ಪೂರ್ವ ಅಧ್ಯಕ್ಷರಾದ ಗೀತಾ ಅರುಣ್, ಪೂರ್ವ ಅಧ್ಯಕ್ಷರಾದ ಗಣೇಶ್ ಅಚಾರ್ಯ ಎರ್ಮಾಳ್, ಮಹಮ್ಮದ್ ನಿಯಾಜ್, ನಿಯೋಜಿತ ಅಧ್ಯಕ್ಷ ಬಿ.ಎಸ್ ಅಚಾರ್ಯ, ಕಾರ್ಯದರ್ಶಿ ಪವನ್ ಸಾಲ್ಯಾನ್, ಕೋಶಾಧಿಕಾರಿ ಸುನಿಲ್ ಕುಮಾರ್, ಸದಸ್ಯರಾದ ಜ್ಯೋತಿ ಮೆನನ್, ಪುಷ್ಪಲತಾ ಗಂಗಾಧರ್, ತಸ್ನೀನ್ ಅರಾ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಬಿ.ಎಸ್ ಅಚಾರ್ಯ ನಿರೂಪಿಸಿದರು. ಪವನ್ ಸಾಲ್ಯಾನ್ ವಂದಿಸಿದರು.
22 Nov 2023, 09:14 PM
Category: Kaup
Tags: