ಉಡುಪಿ : ಎನ್ ಎ ಐ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ
Thumbnail
ಉಡುಪಿ : ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಉಡುಪಿ ಜಿಲ್ಲಾಧ್ಯಕ್ಷರಾಗಿ ನಾಡಿನ ಸುದ್ದಿ ಪತ್ರಿಕೆ ಉಪಸಂಪಾದಕರಾದ ಕಿರಣ್ ಪೂಜಾರಿ ಆಯ್ಕೆಯಾಗಿದ್ದಾರೆ. 1998ರಲ್ಲಿ "ಜನ ಈದಿನ" ಪತ್ರಿಕೆ ಮೂಲಕ ಪತ್ರಿಕಾರಂಗಕ್ಕೆ ಪಾದಾರ್ಪಣೆ ಮಾಡಿದರು. ಸ್ಟಿಂಗ್ ರಿಪೋರ್ಟರ್ ಆಗಿ ಭ್ರಷ್ಟಚಾರ, ಅಕ್ರಮ, ಕಾನೂನು ಬಾಹಿರ ಚಟುವಟಿಕೆಗಳನ್ನು ಬಯಲಿಗೆ ಎಳೆದು ಪತ್ರಿಕಾ ಲೋಕದಲ್ಲಿ ಪ್ರಾಮಾಣಿಕ, ನೇರ ನುಡಿ, ರಾಜಿ ಆಗದ ಪತ್ರಕರ್ತ, ಸಾಮಾಜಿಕ ಕಾರ್ಯಕರ್ತನನ್ನು ಗುರುತಿಸಿ ರಾಷ್ಟ್ರೀಯ ಸಂಘದ ಕಾರ್ಯದರ್ಶಿ ವಿಪಿನ್ ಗೌರ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಭಾರತದ ಎಲ್ಲ ರಾಜ್ಯ ಗಳಲ್ಲಿ ಶಾಖೆಯನ್ನು ಹೊಂದಿದ್ದು, ಭಾರತ ಸರಕಾರದಿಂದ ಮಾನ್ಯತೆ ಪಡೆದಿದೆ.
10 Dec 2023, 09:09 PM
Category: Kaup
Tags: