ಕಾಪು : ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ
ಕಾಪು : ಇಲ್ಲಿನ ಸಮಾಜ ಸೇವಕ, ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕರೂ ಆಗಿದ್ದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಜನರ ಪ್ರೀತಿಯ ಲೀಲಣ್ಣ ಸರಳ ಸಜ್ಜನ ವ್ಯಕ್ತಿಯಾಗಿ ಓರ್ವ ಉತ್ತಮ ನಟ, ನಿರ್ದೇಶಕನಗಿ,
ಕಾಪು ರಂಗತರಂಗ ತಂಡದ ಜನಪ್ರಿಯತೆಗೆ ಕಾರಣವಾಗಿದ್ದರು. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಸಮಾಜದ ಪರವಾಗಿ ಕಾಳಜಿ ಹೊಂದಿದ್ದರು.
ಸಮಾಜ ಸೇವಕನಾಗಿ, ಕಾಪು ಬಂಟರ ಸಂಘದ ಮಾಜಿ ಅಧ್ಯಕ್ಷ, ಭಜನಾ ಮಂಡಳಿಯ ಸಂಚಾಲಕ ಆಗಿದ್ದರು. ಅವರು ದಂಪತಿ ಸಹಿತವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಆಘಾತವುಂಟು ಮಾಡಿದೆ.
ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ಸಾಯಂಕಾಲ 4 ಘಂಟೆಯ ನಂತರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
