ಮುಸ್ಲಿಂ ಮಹಿಳೆಯರ ಅವಹೇಳನ - ಡಾ| ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು : ರಮೀಜ್ ಹುಸೇನ್
ಪಡುಬಿದ್ರಿ : ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಳಿಕೆ ನೀಡಿ, ಮಹಿಳೆಯರ ಮನಸ್ಸಿಗೆ ನೋವು ಉಂಟು ಮಾಡಿದ ವಿಕೃತ ಮನಸ್ಸಿನ ಡಾ| ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಸರಕಾರಕ್ಕೆ ಮನವಿ ಮಾಡಿರುತ್ತಾರೆ.
ಪದೇ ಪದೇ ಇಂತಹ ಉದ್ರೇಕ ಹೇಳಿಕೆ ನೀಡಿ ಸಮಾಜವನ್ನು ಒಡೆಯುವ ಕೆಲಸವನ್ನು ನಿರಂತರ ವಾಗಿ ಮಾಡುತಿದ್ದು, ಭಾರತ ದೇಶದಲ್ಲಿ ಸೌಹಾರ್ದತೆಯಲ್ಲಿ ಬದುಕುತ್ತಿರುವ ನಾಗರಿಕ ಸಮಾಜದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದ್ವೇಷ ಸಾಧಿಸುವ ಹಾಗು ರಾಜ್ಯದ ಜನಗಳ ಸೌಹಾರ್ದ ಬದುಕಿಗೆ ಧಕ್ಕೆ ತರುವ ಇಂತಹ ಘಟನೆಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಪ್ರಭಾಕರ್ ಭಟ್ ರ ಹೇಳಿಕೆ ಇಡೀ ಮಹಿಳಾ ಸಮುದಾಯದಕ್ಕೆ ಅವಮಾನಿಸುವಂತಾಗಿದ್ದು ಇದನ್ನು ಧರ್ಮ, ಜಾತಿ ಭೇದ ಮರೆತು ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತಿಭಟನೆ ಕೃೆಗೊಂಡಿದ್ದು ಪ್ರಭಾಕರ ಭಟ್ಟರ ಮೇಲೆ ಕಠಿಣ ಕಾನೂನು ಕ್ರಮ ಕೆೃಗೊಳ್ಳಬೇಕು ಮತ್ತು ಕೋರ್ಟ್ ಆತನಿಗೆ ನೀಡಿದ ಮಧ್ಯಂತರ ಜಾಮೀನು ರದ್ದುಪಡಿಸಿ ಆದಷ್ಟು ಬೇಗ ಬಂಧಿಸಬೇಕು.
ಸುಪ್ರೀಮ್ ಕೋರ್ಟ್ ಇಂತಹ ಕೋಮುದ್ವೇಷ ಹೇಳಿಕೆ ನೀಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸುವಂತೆ ಸರಕಾರಕ್ಕೆ ಆದೇಶಿಸಿದೆ. ಆದ್ದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಸಮಾಜಘಾತುಕರನ್ನು ಹತ್ತಿಕ್ಕಲು ಈ ಕೂಡಲೇ ಕ್ರಮ ಜರಗಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವ ವ್ಯಕ್ತಿಗಳನ್ನು ಹತ್ತಿಕ್ಕಲು ಸಾಧ್ಯ ಮತ್ತು ಇತರರಿಗೆ ಪಾಠವಾಗುತ್ತದೆ ಎಂದು ತಿಳಿಸಿದ್ದಾರೆ.
