ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಸದಸ್ಯರಿಂದ ರಸ್ತೆ ದುರಸ್ತಿ ಕಾರ್ಯ
ಪಡುಬಿದ್ರಿ : ಸದಾ ಜನಪರ ಕಾಳಜಿಯ ಕಾರ್ಯಗಳನ್ನು ಮಾಡುತ್ತಿರುವ ಪಡುಬಿದ್ರಿಯ ಕರಾವಳಿ ಸ್ಟಾರ್ಸ್ ನಡಿಪಟ್ನ ತಂಡವು ಎರಡು ಸ್ಥಳಗಳಲ್ಲಿ ರಸ್ತೆಯಲ್ಲಿದ್ದ ಗುಂಡಿಯನ್ನು ಮುಚ್ಚುವ ಮೂಲಕ ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
ಪಡುಬಿದ್ರಿ ಬೀಚ್ ರಸ್ತೆಯ ತಿರುವಿನಲ್ಲಿ ಅಪಾಯಕಾರಿಯಾಗಿ ಪರಿಣಮಿಸಿದ ಗುಂಡಿ ಮತ್ತು ಪಡುಹಿತ್ಲು ಜಾರಂದಾಯ ಬಂಟ ದೈವಸ್ಥಾನಕ್ಕೆ ಹೋಗುವ ರಸ್ತೆಯ ಗುಂಡಿಯನ್ನು ಮುಚ್ಚಲಾಯಿತು.
ಈ ಕಾರ್ಯದಲ್ಲಿ ಸಂಸ್ಥೆಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು
