ಜನವರಿ ‌4 : ಉಡುಪಿ ಜಿಲ್ಲಾ ಕುಲಾಲ ಸಂಘಟನೆ ರಚನೆಯ ಪೂರ್ವಭಾವಿ ಸಭೆ
Thumbnail
ಉಡುಪಿ : ಜಿಲ್ಲಾ ಕುಲಾಲ ಸಂಘಟನೆಗಳ ಒಕ್ಕೂಟ ರಚನೆಯ ಪೂರ್ವ ಸಿದ್ದತೆ ಸಭೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದ ಈ ಬಾರಿಯ ಪುತ್ತಿಗೆ ಪರ್ಯಾಯದಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆಯ ಬಗ್ಗೆ ಚರ್ಚಿಸುವುದಕ್ಕೆ ಜನವರಿ 4 ರಂದು ಸಂಜೆ 4 ಗಂಟೆಗೆ ಅಂಬಲಪಾಡಿಯ ಕಾರ್ತಿಕ್ ಎಸ್ಟೇಟ್ ಹೋಟೆಲ್ನಲ್ಲಿ ಸಭೆ ಕರೆಯಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಕುಲಾಲ ಸಂಘಟನೆಗಳ ಸಂಸ್ಥೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜೊತೆಗೆ ಹಿರಿಯ ಸದಸ್ಯರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಸಭೆ ಯಶಸ್ವಿಗೊಳಿಸಿ ಎಂದು ಕುಲಾಲ ಸಮುದಾಯದ ಪ್ರಮುಖರು ಪ್ರಕಟಣೆಯಲ್ಲಿ ತಿಳಿಸಿರುವರು.
03 Jan 2024, 08:57 PM
Category: Kaup
Tags: