ಪಡುಬಿದ್ರಿ : ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ
Thumbnail
ಪಡುಬಿದ್ರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಇಂದು ಪಡುಬಿದ್ರಿ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಅಜಿತ್, ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಉಡುಪಿ ಅಂಚೆ ಇಲಾಖೆಯ ಕೃಷ್ಣರಾಜ ಭಟ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿಸ್ ಹಾಗೂ ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.
Additional image Additional image
10 Jan 2024, 03:55 PM
Category: Kaup
Tags: