ಪಡುಬಿದ್ರಿ : ಶಿವಾಯ ಫೌಂಡೇಶನ್ ವತಿಯಿಂದ ಚಿಕಿತ್ಸೆಗೆ ನೆರವು
Thumbnail
ಪಡುಬಿದ್ರಿ : ಪದವಿ ಶಿಕ್ಷಣ ಪಡೆಯುತ್ತಿರುವ ಶಿರ್ವದ ಜಿಗಿಷಾ ದೇವಾಡಿಗ ಎಂಬ ಹೆಣ್ಣು ಮಗಳ ಬೋನ್ ಟ್ಯೂಮರ್ ಚಿಕಿತ್ಸೆಗಾಗಿ ಶಿವಾಯ ಫೌಂಡೇಶನ್ ವತಿಯಿಂದ, ಗಣಪತಿ ದೇವಸ್ಥಾನ ಪಡುಬಿದ್ರಿ ಇಲ್ಲಿ 45,000 ರೂಪಾಯಿಗಳ ಧನಸಹಾಯದ ಚೆಕ್ ಹಸ್ತಾಂತರಿಸಿ ಜಿಗಿಷಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಆಸ್ಪೆನ್ ಎಸ್ ಇ ಝಡ್ ಮುಖ್ಯಸ್ಥ ಅಶೋಕ್ ಕುಮಾರ್ ಶೆಟ್ಟಿ, ಸಂಸ್ಥೆಯ ಗೌರವಾಧ್ಯಕ್ಷರಾದ ನವೀನಚಂದ್ರ ಶೆಟ್ಟಿ, ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಫಲಿಮಾರು, ಕಾರ್ಯಕಾರಿ ಸಮಿತಿ ಸದಸ್ಯರಾದ ರವಿ ಶೆಟ್ಟಿ ಶಾರದೆ, ಸದಸ್ಯರಾದ ಮಹೇಶ್ ದೇವಾಡಿಗ ಸ್ಮೈಲ್ ಫೋಟೊಗ್ರಫಿ ಮುಕ್ಕ ಮತ್ತು ಜಗನ್ನಾಥ್ ಶೆಟ್ಟಿ, ರಮಣಿ ಐಸ್ಕ್ರೀಂ ಪಡುಬಿದ್ರಿ ಮುಂತಾದವರು ಉಪಸ್ಥಿತರಿದ್ದರು.
09 Mar 2024, 02:09 PM
Category: Kaup
Tags: