ಉಡುಪಿ : ಹೋಳಿ ಆಚರಣೆಯಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ವಿರೋಧಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಮನವಿ
ಉಡುಪಿ : ಹೋಳಿ ಹಬ್ಬದ ಆಚರಣೆಯ ಹೆಸರಿನಲ್ಲಿ ಹಿಂದೂ ಸಂಸ್ಕೃತಿಗೆ ಧಕ್ಕೆ ತರುವುದನ್ನು ವಿರೋಧಿಸಿ ಉಡುಪಿಯಲ್ಲಿ ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಯವರಿಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ವಿಶ್ವ ಹಿಂದು ಪರಿಷದ್ ಪ್ರಾಂತೀಯ ಪ್ರಮುಖ್ ಸುನಿಲ್ ಕೆ. ಆರ್, ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಉಡುಪಿ ಜಿಲ್ಲಾ ಸಂಯೋಜಕ್ ಚೇತನ್ ಪೇರಲ್ಕೆ, ಬಜರಂಗದಳ ಉಡುಪಿ ಜಿಲ್ಲಾ ಸಹ ಸಂಯೋಜಕ್ ಮನೋಜ್ ಮಲ್ಪೆ, ಬಜರಂಗದಳ ಉಡುಪಿ ಜಿಲ್ಲಾ ಸುರಕ್ಷಾ ಪ್ರಮುಖ ರಾಜೇಶ್ ಕೋಟ್ಯಾನ್, ಜಿಲ್ಲಾ ಸೇವಾ ಪ್ರಮುಖ್ ವಿಖ್ಯಾತ್ ಭಟ್, ವಿಶ್ವ ಹಿಂದು ಪರಿಷದ್ ವಿದ್ಯಾರ್ಥಿ ಪ್ರಮುಖ್ ಕಿರಣ್ ಮಲ್ಪೆ ಮತ್ತಿತರರು ಉಪಸ್ಥಿತರಿದ್ದರು.
