ಬಂಟಕಲ್ಲು ಪರಿಸರದ ನಾಗರಿಕರಿಗೆ ಪೊಲೀಸ್ ಮಾಹಿತಿ ಕಾರ್ಯಕ್ರಮ
Thumbnail
ನಾಗರಿಕ ಸೇವಾ ಸಮಿತಿ ರಿ ಬಂಟಕಲ್ಲು ಇವರ ಆಶ್ರಯದಲ್ಲಿ ಬಂಟಕಲ್ಲು ಪರಿಸರದ ನಾಗರಿಕರಿಗೆ ಪೊಲೀಸ್ ಮಾಹಿತಿ ಕಾರ್ಯಕ್ರಮ ಇಂದು ಬಂಟಕಲ್ಲು ದೇವಸ್ಥಾನದ ವಠಾರದಲ್ಲಿ ನಡೆಯಿತು ಸಮಿತಿಯ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು ಶಿರ್ವ ಠಾಣಾಧಿಕಾರಿ ಶ್ರೀ ಶೈಲ ಮುರುಗೋಡು ಇವರು ಪೊಲೀಸ್ ಇಲಾಖೆಯ ಬಗ್ಗೆ ಮಾಹಿತಿ ನೀಡಿದರು ಬಂಟಕಲ್ಲು ನಾಗರಿಕ ಸಮಿತಿಯ ಉಚಿತ ಆಂಬುಲೆನ್ಸ್ ಯೋಜನೆ ಹಾಗೂ ಕೊರೋನಾ ಜಾಗೃತಿಯ ಬಗ್ಗೆ ಸ್ಟಿಕ್ಕರ್ ಬಿಡುಗಡೆಗೊಳಿಸಿದರು ಬಂಟಕಲ್ಲು ದೇವಸ್ಥಾನದ ಆಡಳಿತ ಮಂಡಳಿಯ ಶ್ರೀ ಸುರೇಂದ್ರ ನಾಯಕ್ ರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಕಾರ್ಯದರ್ಶಿ ಶ್ರೀ ದಿನೇಶ್ ದೇವಾಡಿಗ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು ಬಂಟಕಲ್ಲು ಪರಿಸರದ ನಾಗರಿಕರು ರಿಕ್ಷಾ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು ಕಾರು ಚಾಲಕ ಮತ್ತು ಮಾಲಕರ ಸಂಘದ ಪದಾಧಿಕಾರಿಗಳು ಯುವ ವೃಂದ ಬಂಟಕಲ್ಲು ಪದಾಧಿಕಾರಿಗಳು ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು ಕೊರೊನ ಜಾಗೃತಿ ಸ್ಟಿಕ್ಕರ್ ಬಿಡುಗಡೆಯ ಕ್ಷಣ ಪೊಲೀಸ್ ಮಾಹಿತಿ ಕಾರ್ಯಕ್ರಮ
Additional image Additional image
13 Aug 2020, 10:13 PM
Category: Kaup
Tags: