ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ - ಬೇಸಿಗೆ ಶಿಬಿರದ ಉದ್ಘಾಟನೆ
Thumbnail
ಕುತ್ಯಾರು : ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರು ಏಪ್ರಿಲ್ 1ರಂದು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಬೇಸಿಗೆ ಶಿಬಿರವು ಉದ್ಘಾಟನೆಗೊಂಡಿತು. ಕುತ್ಯಾರು ಯುವಕ ಮಂಡಲದ ಅಧ್ಯಕ್ಷರಾದ ಸುಶಾಂತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಬಿರದಲ್ಲಿ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಹಾರೈಕೆಯ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸೆಟ್ ನ ಕಾರ್ಯಾಧ್ಯಕ್ಷರಾದ ಮೋಹನ್ ಕುಮಾರ್ ಬೆಳ್ಳೂರು ವಹಿಸಿದ್ದರು. ಗುರುರಾಜ್ ಆಚಾರ್ಯ, ದಿವಾಕರ ಆಚಾರ್ಯ, ಪ್ರಭಾರ ಮುಖ್ಯ ಶಿಕ್ಷಕಿ ಅಮಿತಾ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅಮಿತಾ ಸ್ವಾಗತಿಸಿದರು.ಶಿಕ್ಷಕಿ ರಮ್ಯಾ ಪ್ರಭು ನಿರೂಪಿಸಿ, ಶಿಕ್ಷಕ ಮಂಜುನಾಥ ಶೇಟ್ ವಂದಿಸಿದರು.
Additional image
02 Apr 2024, 11:07 AM
Category: Kaup
Tags: