ಕಾಪು : ಚುನಾವಣೆಗೆ ಪೂರ್ವಭಾವಿಯಾಗಿ ಪೊಲೀಸ್ ಪಥಸಂಚಲನ
ಕಾಪು : ಕ್ಷೇತ್ರದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದೆ ಶಾಂತಿ,ಸೌಹಾರ್ದತೆಯಿಂದ ಚುನಾವಣೆ ನಡೆಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಕಾಪುವಿನ ಪೊಲಿಪು ಮಸೀದಿಯಿಂದ K1 ಹೋಟೆಲ್ ವರೆಗೆ ಮಂಗಳವಾರ ಪಥಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಪೋಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಟಿ ಸಿದ್ದಲಿಂಗಪ್ಪ, DYSP ಅರವಿಂದ್, ಸರ್ಕಲ್ ಇನ್ಸ್ಪೆಕ್ಟರ್ ಜಯಶ್ರೀ ಹಾಗೂ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಭಾಗವಹಿಸಿ, ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.
ಪೋಲೀಸ್ ವರಿಷ್ಠಾಧಿಕಾರಿಗಳಾದ ಟಿ ಸಿದ್ದಲಿಂಗಪ್ಪ ಮಾತನಾಡಿ, ಮತದಾರರು ನಿರ್ಭೀತಿಯಿಂದ ಚುನಾವಣೆಯಲ್ಲಿ ಭಾಗವಹಿಸುವಂತೆ ಮಾಡಲು ಪೋಲೀಸ್ ಇಲಾಖೆ ಸಜ್ಜಾಗಿದ್ದು
ಮುಂಜಾಗ್ರತೆ ಮತ್ತು ಜನಜಾಗೃತಿ ಮೂಡಿಸುವ ಸಲುವಾಗಿ ಪೋಲೀಸ್ ಇಲಾಖೆಯ ಸಿದ್ದತೆ ಇದಾಗಿದೆ ಎಂದರು.
ಕಾಪು ತಾಲ್ಲೂಕಿನ ದಂಡಾಧಿಕಾರಿ ಡಾ.ಪ್ರತಿಭಾ ಆರ್ ಮಾತನಾಡಿ, ಪೋಲೀಸ್ ವರಿಷ್ಠಾಧಿಕಾರಿಗಳಾದ ಟಿ ಸಿದ್ದಲಿಂಗಪ್ಪ ಇವರು ಸ್ವತಃ ಇಡೀ ಪಥಸಂಚನದಲ್ಲಿ ಭಾಗವಹಿಸಿದ್ದರಿಂದ ಜಾಗೃತಿ ಸಂದೇಶ ಪರಿಣಾಮಕಾರಿಯಾಗಿ ತಲುಪಿದೆ. ಕಾಪು ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನಡೆಯಲು ಕಂದಾಯ ಇಲಾಖೆ ಕೂಡಾ ಸರ್ವಸನ್ನದ್ಧವಾಗಿದೆ ಎಂದರು.
